ಎಸ್‌ವಿಆರ್‌ ಅವರಿಗೆ ಸಚಿವ ಸ್ಥಾನ ನೀಡಲು ನಾಯಕ ಸಮಾಜದ ಆಗ್ರಹ

ಜಗಳೂರು, ಜು.29 – ಜಗಳೂರು ಕ್ಷೇತ್ರದ ಶಾಸಕ ಎಸ್.ವಿ.ರಾಮಚಂದ್ರ ಅವರಿಗೆ ದಾವಣಗೆರೆ ಜಿಲ್ಲೆಯ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಕಾರ್ಯದರ್ಶಿ ಬಿದರಕೆರೆ ರವಿ ಅವರು ಬಿಜೆಪಿ ವರಿಷ್ಠಿರಲ್ಲಿ ಮನವಿ ಮಾಡಿದ್ದಾರೆ.

ಪಟ್ಟಣದ ಪತ್ರಕರ್ತರ ಭವನದಲ್ಲಿ ಗುರುವಾರ ನಾಯಕ ಸಮಾಜದ ವತಿಯಿಂದ ನಡೆದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ತಾಲ್ಲೂಕು ಬಿಜೆಪಿ ಮಾಜಿ ಅಧ್ಯಕ್ಷರು, ನಾಯಕ ಸಮಾಜದ ಮುಖಂಡ ಕೃಷ್ಣಮೂರ್ತಿ ಮತ್ತು ಬಿಸ್ತುವಳ್ಳಿ ವಿಎಸ್‍ಎಸ್‍ಎನ್ ಅಧ್ಯಕ್ಷ ಬಿ.ಬಸವರಾಜು ಬಾಬು ಮಾತನಾಡಿ, ಮೂರು ಬಾರಿ ಶಾಸಕರಾಗಿ ಶಾಸಕರಾಗಿರುವ ರಾಮಚಂದ್ರರವರಿಗೆ ಸಚಿವ ಸ್ಥಾನ ನೀಡುವ ಮೂಲಕ ಹಿಂದುಳಿದ ಕ್ಷೇತ್ರಕ್ಕೆ ನ್ಯಾಯ ಒದಗಿಸಿಕೊಡುವಂತೆ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಮುಖಂಡರನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಲ್ಲೇದೇವರಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಡಯ್ಯ, ನಾಯಕ ಸಮಾಜದ ಮುಖಂಡ ಮಂಜಣ್ಣ, ಪ. ಪಂ. ಸದಸ್ಯ ಪಾಪಲಿಂಗಪ್ಪ, ಮಡ್ರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲೇಶಪ್ಪ, ಕ್ಯಾಸನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜು, ಮುಖಂಡರುಗಳಾದ ಅಂಜಿನಪ್ಪ, ವಿಜಯ್‍ಕು ಮಾರ್, ಮಾರುತಿ, ಸುರೇಶ್, ಹನುಮಂತಪ್ಪ ಸೇರಿದಂತೆ ಇತರರು ಗೋಷ್ಠಿಯಲ್ಲಿದ್ದರು.

error: Content is protected !!