ಶಾಸಕಿ ಪೂರ್ಣಿಮಾಗೆ ಸಚಿವ ಸ್ಥಾನ ನೀಡಲು ಒತ್ತಾಯ

ಜಗಳೂರು, ಜು.29 – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಯಾದವ ಸಮಾಜದ ಏಕೈಕ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಯಾದವ ಸಮಾಜದ ತಾಲ್ಲೂಕು ಅಧ್ಯಕ್ಷ ಕೃಷ್ಣ ಮೂರ್ತಿ ಅವರು ಬಿಜೆಪಿ ವರಿಷ್ಠಿರಲ್ಲಿ ಮನವಿ ಮಾಡಿದ್ದಾರೆ.

ಪಟ್ಟಣದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.  ಯಾದವ ಸಮಾಜದ ಜಿಲ್ಲಾ ಕಾರ್ಯದರ್ಶಿ ಹಾಲಸ್ವಾಮಿ ಮಾತನಾಡಿ, ಜಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ 3 ಬಾರಿ ಶಾಸಕರಾಗಿರುವ ಎಸ್.ವಿ.ರಾಮಚಂದ್ರ ಅವರಿಗೂ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಯಾದವ ಸಮಾಜದ ಮುಖಂಡರುಗಳಾದ ಗೊಲ್ಲರಹಟ್ಟಿ ತಿಪ್ಪೇಸ್ವಾಮಿ, ಬಾಲರಾಜು, ಇಂದ್ರೇಶ್, ಬಸವರಾಜು, ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

error: Content is protected !!