ಮಹಾನಗರ ಪಾಲಿಕೆಯಲ್ಲಿ ಬಸವ ಜಯಂತಿ

ದಾವಣಗೆರೆ, ಮೇ 19- ಮಹಾನಗರ ಪಾಲಿಕೆ ವತಿಯಿಂದ ಪಾಲಿಕೆ ಸಭಾಂಗಣದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವವನ್ನು ಆಚರಿಸಲಾಯಿತು. ಮಹಾಪೌರರಾದ ಎಸ್.ಟಿ. ವೀರೇಶ್ ಅವರು ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ವಿರೋಧ ಪಕ್ಷದ ನಾಯಕ ಎ.ನಾಗರಾಜ್, ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಡಿ. ಗೋಣಪ್ಪ, ಸದಸ್ಯ ಕೆ. ಚಮನ್ ಸಾಬ್, ಆಯುಕ್ತ ವಿಶ್ವನಾಥ್ ಮುದಜ್ಜಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!