ಬಿಜೆಪಿ ಕಾರ್ಯಾಲಯದಲ್ಲಿ ಯೋಗ ದಿನ

ದಾವಣಗೆರೆ, ಜೂ. 21- ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ವಿಶ್ವ ಯೋಗ ದಿನ ಆಚರಿಸಲಾಯಿತು. ಪಕ್ಷದ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಜಿಲ್ಲಾ ಉಪಾಧ್ಯಕ್ಷರುಗಳಾದ ಶಿವರಾಜ್ ಪಟೇಲ್, ಮಂಜಾನಾಯ್ಕ್, ಶ್ರೀನಿವಾಸ್ ದಾಸಕರಿಯಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ ಮಹೇಶ್, ಮಹಾ ಪೌರ ಎಸ್.ಟಿ.ವೀರೇಶ್, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್, ಮಾಜಿ ಶಾಸಕ ಎಂ. ಬಸವರಾಜನಾಯ್ಕ, ಪಾಲಿಕೆ ಮಾಜಿ ಮಹಾಪೌರರುಗಳಾದ ಎಂ.ಎಸ್. ವಿಠ್ಠಲ್, ವಸಂತ್, ಯುವ ಮೋರ್ಚಾ ಅಧ್ಯಕ್ಷ ಶಿವಪ್ರಕಾಶ್, ಕೋಶಾಧ್ಯಕ್ಷ ಬಾತಿ ವೀರೇಶ್, ಜಿಲ್ಲಾ ಮಾಧ್ಯಮ ಸಂಚಾಲಕ ಹೆಚ್.ಪಿ. ವಿಶ್ವಾಸ್, ಜಿಲ್ಲಾ ಕಾನೂನು ಪ್ರಕೋಷ್ಠದ ಪ್ರಮುಖ ರಾಘವೇಂದ್ರ, ದಿವಾಕರ್, ಪಕ್ಷದ ಮುಖಂಡರಾದ ಹೇಮಂತ್‌ ಕುಮಾರ್, ದೇವರಮನೆ ಶಿವಕುಮಾರ್, ಎಸ್ಟಿ ಮೋರ್ಚಾ ಅಧ್ಯಕ್ಷ ಕೃಷ್ಣಕುಮಾರ್, ಜಿ.ವಿ. ಗಂಗಾಧರ್, ಬಸವರಾಜಯ್ಯ ಮತ್ತಿತರರು ಉಪಸ್ಥಿತರಿದ್ದರು.

error: Content is protected !!