ಕೂಡ್ಲಿಗಿ : ಮಾದಕ ವಸ್ತುಗಳು ಸಮಾಜಕ್ಕೆ ಮಾರಕ

ಪಿಎಸ್‌ಐ ತಿಮ್ಮಣ್ಣ ಚಾಮನೂರು

ಕೂಡ್ಲಿಗಿ, ಜೂ.28- ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಹೊಸಹಳ್ಳಿ ಗ್ರಾಮದಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪಿಎಸ್ಐ ತಿಮ್ಮಣ್ಣ ಚಾಮನೂರ್, ಯುವ ಪೀಳಿಗೆ ತಂಬಾಕು, ಗುಟ್ಕಾ, ಸ್ಟಾರ್, ವಿಮಲ್‌ನಂತಹ  ದುಶ್ಚಟಗಳಿಗೆ ಒಳಗಾಗಿ ಹಾಳಾಗುತ್ತಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ  ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು. ಹೊಸಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಗಳಾದ ತಿಮ್ಮಣ್ಣ ಚಾಮನೂರು, ಪಿಎಸ್ಐ ನಾಗರತ್ನಮ್ಮ, ಎಎಸ್‌ಐ ಕೆ.  ಗೋವಿಂದಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!