ಪಂಚಮಸಾಲಿ ಸಮುದಾಯಕ್ಕೆ `2ಎ’ ಮೀಸಲಾತಿ ಕಲ್ಪಿಸಿ

ಹರಿಹರ, ಅ.19- ನಗರದ ಪಂಚಮಸಾಲಿ ಗುರುಪೀಠಕ್ಕೆ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪಂಚಮಸಾಲಿ ಗುರುಪೀಠಾಧ್ಯಕ್ಷರಾದ ಶ್ರೀ ವಚನಾನಂದ ಮಹಾ ಸ್ವಾಮೀಜಿ ಪಂಚಮಸಾಲಿ ಸಮುದಾಯಕ್ಕೆ ರಾಜ್ಯದಲ್ಲಿ 2ಎ ವರ್ಗದಡಿ ಮೀಸಲಾತಿ ಕಲ್ಪಿಸಿಕೊಡಬೇಕು ಮತ್ತು ಕೇಂದ್ರ ಸರ್ಕಾರವು ಸಮುದಾಯವನ್ನು ಒಬಿಸಿ ಕೆಟಗರಿಯಲ್ಲಿ ಸೇರಿಸಬೇಕು. ಈ ಪ್ರಸ್ತಾಪವನ್ನು ರಾಜ್ಯ ಸರ್ಕಾರವು ಸಚಿವ ಸಂಪುಟದ ಮುಂದಿಟ್ಟು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಕುರಿತು ಚರ್ಚಿಸಬೇಕು ಎಂದು ಲಿಖಿತ ಮನವಿ ಸಲ್ಲಿಸಿ ಕೇಳಿಕೊಂಡರು.

ಮನವಿ ಸ್ವೀಕರಿಸಿದ ಬೊಮ್ಮಾಯಿ, ಸಮುದಾಯದ ಶ್ರೇಯೋಭಿವೃದ್ಧಿಗೆ ಸ್ಪಂದಿಸುವ ಭರವಸೆ ನೀಡಿದರು. ಸಮುದಾಯವನ್ನು 2ಎ ಮೀಸಲಾತಿ ವರ್ಗದಡಿ ಸೇರಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಪ್ರಸ್ತಾವನೆ ಸಲ್ಲಿಸಿರುವ ಶ್ರೀ ವಚನಾನಂದ ಸ್ವಾಮೀಜಿಗೆ ಬೆಂಬಲವಾಗಿ ನಿಲ್ಲುವ ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಧರ್ಮದರ್ಶಿ ಬಿ.ಸಿ.ಉಮಾಪತಿ, ರಾಣೇಬೆನ್ನೂರು ಶಾಸಕ ಅರುಣ್ ಕುಮಾರ್ ಪೂಜಾರ್, ಪಿ.ಡಿ. ಶಿರೂರ, ಯುವ ಘಟಕದ ನವೀನ್ ಪಾಟೀಲ್ ಮತ್ತಿತರರು ಹಾಜರಿದ್ದರು.

error: Content is protected !!