ಯತ್ನಾಳ್ ಪ್ರತಿಕೃತಿ ದಹಿಸಿ ಕನ್ನಡಪರ ಹೋರಾಟಗಾರರ ಆಕ್ರೋಶ

ದಾವಣಗೆರೆ, ಡಿ.4- ಕನ್ನಡಪರ ಹೋರಾಟಗಾ ರರು ವಸೂಲಿಗಾರರು ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೀಯಾಳಿಸಿರುವುದನ್ನು ಖಂಡಿಸಿ, ಜಿಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೂ ಟದ ನೇತೃತ್ವದಲ್ಲಿ ಕನ್ನಡಪರ ಹೋರಾಟಗಾರರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮುಖೇನ ಜಯದೇವ ವೃತ್ತದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಪ್ರತಿಕೃತಿ ದಹಿಸಿ, ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿದರು. ಪ್ರತಿಭಟನೆಯಲ್ಲಿ ಟಗರಿಗೆ ಕನ್ನಡಿಗರು, ಕತ್ತೆಗೆ ರಾಜಕಾರಣಿಗಳನ್ನು ಹೋಲಿಸಿ ನಾಮಫಲಕ ನೇತು ಹಾಕಿದ್ದು ಕಂಡು ಬಂತು.

ಈ ಕೂಡಲೇ ಮರಾಠ ಅಭಿವೃದ್ಧಿ ನಿಗಮವನ್ನು ರದ್ದುಪಡಿಸಬೇಕು. ಎಲ್ಲಾ ಜಾತಿಯ ಬಡವರಿಗೆ ಅಭಿ ವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷ ಕೆ.ಜಿ. ಯಲ್ಲಪ್ಪ, ಅಧ್ಯಕ್ಷ ಎನ್.ಹೆಚ್. ಹಾಲೇಶ್, ಕಾರ್ಯಾ ಧ್ಯಕ್ಷ ವಿ. ಅನಿನಾಶ್, ಎಸ್. ರಾಜು, ನಾಗರಾಜ, ಡಾ. ಬಿ. ವಾಸುದೇವ್, ಎಂ.ಎ. ಸಾಧಿಕ್, ಭೋಜ ರಾಜು, ಐಗೂರು ಸುರೇಶ್, ಡಿ. ಬಸವರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.

error: Content is protected !!