ಹೋರಾಟಗಾರ ಮುರುಘರಾಜೇಂದ್ರ ಒಡೆಯರ್ ನಿಧನಕ್ಕೆ ಶಿವಮೂರ್ತಿ ಮುರುಘಾ ಶರಣರ ಶೋಕ

ಚಿತ್ರದುರ್ಗ, ಸೆ.21- ಭದ್ರಾ ಮೇಲ್ದಂಡೆ ಯೋಜನೆ, ಚಿತ್ರ ದುರ್ಗ-ತುಮಕೂರು ರೈಲ್ವೇ ಯೋಜನೆ ಸೇರಿದಂತೆ ಜಿಲ್ಲೆ ಮತ್ತು ರಾಜ್ಯಾದ್ಯಂತ ನಡೆದ ಹಲವಾರು ಜನಪರ ಹೋ ರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡು ವಿಶೇಷವಾಗಿ ಚಿತ್ರದುರ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದ ಸಾಮಾಜಿಕ ಹೋರಾ ಟಗಾರ ಮುರುಘರಾಜೇಂದ್ರ ಒಡೆ ಯರ್ ಅವರ ನಿಧನಕ್ಕೆ ಚಿತ್ರದುರ್ಗ ಶ್ರೀ ಮುರುಘರಾಜೇಂದ್ರ ಮಠದ ಡಾ. ಶಿವಮೂರ್ತಿ ಮುರುಘಾ ಶರ ಣರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಒಡೆಯರ್ ಅವರ ನಿಧನದಿಂದ ಜಿಲ್ಲೆಗೆ ತುಂಬಲಾರದ ನಷ್ಟವುಂಟಾಗಿ ದೆ. ಶ್ರೀಮಠದೊಂದಿಗೆ ನಿಕಟ ಸಂ ಪರ್ಕ ಹೊಂದಿದ್ದ ಅವರು, ಶ್ರೀಮಠದ ಅನೇಕ ಜನಹಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಇತ್ತೀಚೆಗಷ್ಟೇ ಅವರಿಗೆ ಶ್ರೀಮಠದ ಪ್ರತಿಷ್ಠಿತ ಮುರುಘಾಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು ಎಂದು ಶರಣರು ಸ್ಮರಿಸಿದ್ದಾರೆ.

error: Content is protected !!