ಪಾಲಿಕೆಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ

ದಾವಣಗೆರೆ, ಸೆ.23- ಮಹಾನಗರ ಪಾಲಿಕೆಯಿಂದ ನಗರದ 22ನೇ ವಾರ್ಡ್‌ನಲ್ಲಿ ಪಾಲಿಕೆ ಸದಸ್ಯ ದೇವರಮನೆ ಶಿವಕುಮಾರ್ ಅವರು ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಿಸಿದರು.

ವಾರ್ಡ್‌ನ 24 ಜನ ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿದ ಶಿವಕುಮಾರ್‌ ಅವರು, ಈ ಗುರುತಿನ ಚೀಟಿಗಳಿಂದ ವ್ಯಾಪಾರಿಗಳಿಗೆ ಬ್ಯಾಂಕಿನ ಎಲ್ಲಾ ರೀತಿ ಸೌಲಭ್ಯಗಳು ದೊರೆಯಲಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಾರ್ಡಿನ ಪ್ರಮುಖರಾದ ರವಿಸ್ವಾಮಿ, ನಾಗರಾಜಗೌಡ, ಮೀಸೆ ರಾಮಣ್ಣ, ದೋಸೆ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!