ಧರ್ಮಸ್ಥಳ ಸಂಘದಿಂದ ಉಚಿತ ಟ್ಯೂಷನ್‌

ಧರ್ಮಸ್ಥಳ ಸಂಘದಿಂದ ಉಚಿತ ಟ್ಯೂಷನ್‌

ಮಲೇಬೆನ್ನೂರು, ಜ. 23 – ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜಿ.ಬೇವಿನಹಳ್ಳಿ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಪ್ರೌಢಶಾಲೆಯಲ್ಲಿ ಗುರು ವಾರ ಹಮ್ಮಿಕೊಂಡಿದ್ದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮವನ್ನು ಯೋಜನೆಯ ಪ್ರಾದೇಶಿಕ ಕಚೇರಿಯ ವಿಭಾಗದ ಜನ ಜಾಗೃತಿ ವೇದಿಕೆಯ ಯೋಜನಾಧಿಕಾರಿ ನಾಗರಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು. 

ಈ ವೇಳೆ ಮಾತನಾಡಿದ ನಾಗರಾಜ್ ಅವರು, ನಮ್ಮ ಸಂಘದ ಸದಸ್ಯರ ಮಕ್ಕಳ ಉನ್ನತ ಶಿಕ್ಷಣಕ್ಕೆ  ಈಗಾಗಲೇ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಕಳೆದ ಎರಡು ವರ್ಷಗಳಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಮಾಡುತ್ತಾ ಬಂದಿದ್ದೇವೆ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಕೊಳ್ಳಬೇಕೆಂದು ಮನವಿ ಮಾಡಿದರು. 

ಮಲೇಬೆನ್ನೂರು ಯೋಜನಾಧಿಕಾರಿ ವಸಂತ ದೇವಾಡಿಗ,  ಗ್ರಾ.ಪಂ. ಮಾಜಿ ಅಧ್ಯಕ್ಷ ಬಿ.ಕೆ ಮಹೇಶ್ವರಪ್ಪ, ಶಾಲಾ ಮುಖ್ಯೋಪಾಧ್ಯಾಯ ಜಯಪ್ಪ, ಜಿಗಳಿ ವಲಯದ ಮೇಲ್ವಿಚಾರಕಿ ಶ್ರೀಮತಿ ಪದ್ಮಾವತಿ ಮತ್ತು ಇತರರು ಭಾಗವಹಿಸಿದ್ದರು.

error: Content is protected !!