ಬಸವನಗರ ಪೊಲೀಸ್ ಠಾಣೆ ಕಟ್ಟಡ ಉದ್ಘಾಟನೆ

ಬಸವನಗರ ಪೊಲೀಸ್ ಠಾಣೆ ಕಟ್ಟಡ ಉದ್ಘಾಟನೆ

ದಾವಣಗೆರೆ,ಜ.27- ನಗರದ ಪಿ.ಹಾಲೇಶಪ್ಪ ರಸ್ತೆಯಲ್ಲಿರುವ ಬಸವ ನಗರ ಪೊಲೀಸ್ ಠಾಣೆಯ ನವೀಕೃತ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ನಿನ್ನೆ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಅಬ್ದಲ್ ಜಬ್ಬಾರ್, ಮಹಾಪೌರರಾದ ಶ್ರೀಮತಿ ಜಯಮ್ಮ ಗೋಪಿನಾಯ್ಕ, ದೂಡಾ ಅಧ್ಯಕ್ಷ ಎ.ವೈ. ಪ್ರಕಾಶ್, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.  ರಿಷ್ಯಂತ್, ಜಿ.ಪ.ಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಚೆನ್ನಪ್ಪ, ಉಪ ವಿಭಾಗಾಧಿಕಾರಿ ಶ್ರೀಮತಿ ಎನ್. ದುರ್ಗಾಶ್ರೀ, ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಪಾಲಿಕೆ ಸದಸ್ಯ ಸ್ವಾಗಿ ಶಾಂತಕುಮಾರ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಮತ್ತಿತರರು ಉಪಸ್ಥಿತರಿದ್ದರು.

error: Content is protected !!