ನಗರದ ಕಾಯಿಪೇಟೆಯಲ್ಲಿ ಇಂದಿನಿಂದ ಬಸವ ಜಯಂತ್ಯೋತ್ಸವ

ದಾವಣಗೆರೆ, ಏ.20- ನಗರದ ಕಾಯಿಪೇಟೆ ಶ್ರೀ ಬಸವೇಶ್ವರ ನಗರದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 23ರ ಭಾನುವಾರ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ.

ನಾಳೆ ದಿನಾಂಕ 22ರ ಶನಿವಾರ ಪ್ರಾತಃಕಾಲ ಶ್ರೀ ಬಸವೇಶ್ವರ ಪಾದಕ್ಕೆ ಮಹಾರುದ್ರಾಭಿಷೇಕ ಜರುಗಲಿದೆ. ನಾಡಿದ್ದು ದಿನಾಂಕ 23ರ ಭಾನುವಾರ ಮುಂಜಾನೆ 6 ಗಂಟೆಗೆ ತೊಟ್ಟಿಲು ಪೂಜೆ, ಸಂಜೆ 7 ಗಂಟೆಗೆ ವಿದ್ಯುತ್ ಅಲಂಕೃತವಾದ ಭವ್ಯವಾದ ಹೂವಿನ ಮಂಟಪದಲ್ಲಿ ಶ್ರೀ ಬಸವೇಶ್ವರ ಮೂರ್ತಿಯ ಮೆರವಣಿಗೆ ರಾಜಬೀದಿಗಳಲ್ಲಿ ಜರುಗಲಿದೆ.

ಬಸವ ಜಯಂತಿ ಪ್ರಯುಕ್ತ ಇದೇ ದಿನಾಂಕ 24ರ ಸೋಮವಾರ ಸರ್ವ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಲು ಅನುಕೂಲವಾಗುವಂತೆ ನಾಡಿದ್ದು ಭಾನುವಾರ ವಾರದ ಸಂತೆಯನ್ನು ರದ್ದು ಪಡಿಸಬೇಕೆಂದು ದೇವಸ್ಥಾನ ಸಂಘದ ಪದಾಧಿಕಾರಿಗಳು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದ್ದಾರೆ.

error: Content is protected !!