ಗಂಗನರಸಿಯಲ್ಲಿ ಇಂದು ಸಾಮೂಹಿಕ ವಿವಾಹ

ಹರಿಹರ ತಾಲ್ಲೂಕು ಗಂಗನರಸಿ ಗ್ರಾಮದಲ್ಲಿ ಶ್ರೀ ಗೋಣಿ ಬಸವೇಶ್ವರ ಸ್ವಾಮಿ ಹೊರಮಠ ಹಾಗೂ ಶ್ರೀ ಹನುಮಂತ ದೇವರ ಜೀರ್ಣೋದ್ಧಾರ ಸಮಿತಿ ವತಿಯಿಂದ ಇಂದು ಬೆಳಿಗ್ಗೆ 11.30 ಕ್ಕೆ ಶ್ರೀ ಗೋಣಿ ಬಸವೇಶ್ವರ ಸ್ವಾಮಿ ಸಮುದಾಯ ಭವನದ ಕೆಳಮಹಡಿಯ ಭೋಜನಾ ಶಾಲೆಯ ಉದ್ಘಾಟನಾ ಸಮಾರಂಭ ಹಾಗೂ ಸರ್ವ ಧರ್ಮೀಯರ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.

ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ, ಶ್ರೀ ಪಟ್ಟದ ಚಿನ್ಮಯಿ ಸ್ವಾಮೀಜಿ, ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಶ್ರೀ ವಚನಾಂದ ಸ್ವಾಮೀಜಿ,   ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಶ್ರೀ  ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. 

ಶಾಮನೂರು ಶಿವಶಂಕರಪ್ಪ ಅವರು ಭೋಜನಾ ಶಾಲೆ ಉದ್ಘಾಟಿಸುವರು. ಸಮಿತಿ ಅಧ್ಯಕ್ಷ ಜಿ.ಎಂ.ನಾಗೇಂ ದ್ರಪ್ಪ ಅಧ್ಯಕ್ಷತೆ ವಹಿಸುವರು. ಬಿ.ಎಂ. ವೀರಪ್ಪ, ಕಾರ್ಯ ದರ್ಶಿ ಗೌಡ್ರು ಚನ್ನಬಸಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.

error: Content is protected !!