ಕಾರ್ಯಕರ್ತರ ಶ್ರಮಕ್ಕೆ ಗೆಲುವಿನ ಪ್ರತಿಫಲ ಸಿಗಲಿದೆ : ಎಸ್ಸೆಸ್ಸೆಂ

ಕಾರ್ಯಕರ್ತರ ಶ್ರಮಕ್ಕೆ ಗೆಲುವಿನ ಪ್ರತಿಫಲ ಸಿಗಲಿದೆ : ಎಸ್ಸೆಸ್ಸೆಂ - Janathavaniದಾವಣಗೆರೆ, ಮೇ 10- ಜಿಲ್ಲೆಯದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅಭ್ಯರ್ಥಿಗಳ ಪರ ವಾಗಿ ಶ್ರಮವಹಿಸಿ ದುಡಿದ್ದಾರೆ. ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ. ಜಿಲ್ಲೆಯಲ್ಲಿ ನೂರಕ್ಕೆ ನೂರು ಗೆಲುವು  ನಿಶ್ಚಿತ ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಸ್.ಎಸ್. ಮಲ್ಲಿಕಾರ್ಜುನ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಎಂಸಿಸಿ ಬಿ ಬ್ಲಾಕ್ ಐಎಂಎ ಹಾಲ್‌ನಲ್ಲಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಯ ಭ್ರಷ್ಠಾಚಾರಕ್ಕೆ ಬೇಸತ್ತ ರಾಜ್ಯದ ಜನತೆ ಈ ಬಾರಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. 140 ರಿಂದ 150 ಕ್ಕೂ ಹೆಚ್ಚು ಸ್ಥಾನಗಳು ಕಾಂಗ್ರೆಸ್ ಪಕ್ಷಕ್ಕೆ ಲಭಿಸಲಿವೆ ಎಂದರು.

ವಿಜಯನಗರದ ಹರಪನಹಳ್ಳಿ ಸೇರಿದಂತೆ ಜಿಲ್ಲೆಯ ಎಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಪುತ್ರ ಸಮರ್ಥ್, ಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು. 

error: Content is protected !!