ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸನ್ಮಾನ

ದಾವಣಗೆರೆ, ಮೇ 11- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ವಲಯ ಘಟಕದ ವತಿಯಿಂದ ಸನ್ಮಾನಿಸಲಾಗುವುದು.

ಜಿಲ್ಲೆಯ ಮಕ್ಕಳಿಗೆ ಕನ್ನಡ ವಿಷಯದಲ್ಲಿ 125 ಕ್ಕೆ 125 ಅಂಕಗಳನ್ನು ಗಳಿಸಿದವರು ಹಾಗೂ ಶಾಲೆಯಲ್ಲಿ ಅತಿ ಹೆಚ್ಚು ಅಂದರೆ 600 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಇದೇ ದಿನಾಂಕ 17ರೊಳಗೆ ಹೆಸರು  ನೋಂದಾಯಿಸಿಕೊಳ್ಳ ಬಹುದು ಎಂದು ರವಿಕುಮಾರ್‌ ಎ.ಜೆ. (88989 88989), ಹರೀಶ್‌ ಎಂ.ಆರ್‌.  (97315 12672)ತಿಳಿಸಿದ್ದಾರೆ.

error: Content is protected !!