ಪಡಿತರ ಆಹಾರ ಧಾನ್ಯ ಹಂಚಿಕೆ

ದಾವಣಗೆರೆ, ಮೇ 15- ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ವಿವಿಧ ವರ್ಗಗಳ ಪಡಿತರ ಚೀಟಿದಾರರಿಗೆ ಮೇ-2023 ಮಾಹೆಗೆ ಅನ್ವಯವಾಗುವಂತೆ ಉಚಿತ ಪಡಿತರ ಧಾನ್ಯ ಪಡೆಯಲು ನ್ಯಾಯಬೆಲೆ ಅಂಗಡಿಗಳಿಗೆ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರಿಗೆ 21 ಕೆ.ಜಿ ಅಕ್ಕಿ ಮತ್ತು ಪ್ರತಿ ಕಾರ್ಡಿಗೆ 14 ಕೆ.ಜಿ ರಾಗಿ, ಆದ್ಯತಾ ಪಡಿತರ ಚೀಟಿದಾರರಿಗೆ 4 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2 ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ ಹಾಗೂ ಪ್ರತಿ ಕೆ.ಜಿ ಗೆ ರೂ 15 ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕಸದಸ್ಯರನ್ನು ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯ ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು ಎಂದು ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ. ಅಶ್ವತ್ಥ್‌ ಎಂ.ಬಿ ತಿಳಿಸಿದ್ದಾರೆ.

error: Content is protected !!