ನಾಳೆ ಸಿಇಟಿ ಪರೀಕ್ಷೆ, ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ

ದಾವಣಗೆರೆ, ಮೇ 18- ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ನಾಡಿದ್ದು ದಿನಾಂಕ 20 ಮತ್ತು 21 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದ್ದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು  ನಿಷೇಧಿತ ಪ್ರದೇಶವೆಂದು  ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಿಸಲು ತಿಳಿಸಿದ್ದಾರೆ.

error: Content is protected !!