ಜಿಲ್ಲೆಯಲ್ಲಿ ಮಳೆಗೆ 79.40 ಲಕ್ಷ ರೂ.ನಷ್ಟ

ದಾವಣಗೆರೆ, ಮೇ 23- ಜಿಲ್ಲೆಯಲ್ಲಿ ನಿನ್ನೆ  13.6 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 79.40 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿಯಲ್ಲಿ ವಾಡಿಕೆ ಮಳೆ 2.5 ಮಿ.ಮೀ ಹಾಗೂ ವಾಸ್ತವ ಮಳೆ 9.5 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 1.0 ಮಿ.ಮೀ ಹಾಗೂ ವಾಸ್ತವ ಮಳೆ 19.5 ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 1.1 ಮಿ.ಮೀ ಹಾಗೂ ವಾಸ್ತವ ಮಳೆ 17.2 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 2.4 ಮಿ.ಮೀ ಹಾಗೂ ವಾಸ್ತವ ಮಳೆ 9.0 ಮಿ.ಮೀ, ಜಗಳೂರು ವಾಡಿಕೆ ಮಳೆ 1.9 ಮಿ.ಮೀ ಹಾಗೂ ವಾಸ್ತವ ಮಳೆ 13.7 ಮಿ.ಮೀ,  ನ್ಯಾಮತಿಯಲ್ಲಿ ವಾಡಿಕೆ ಮಳೆ 2.5 ಮಿ.ಮೀ,  ವಾಸ್ತವ ಮಳೆ 14.1 ಮಿ.ಮೀ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ  1 ಪಕ್ಕಾ ಮನೆಗೆ  ಭಾಗಶಃ ಹಾನಿ,  150 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು ರೂ.30.60 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ  2 ಕಚ್ಚಾ ಮನೆ ಭಾಗಶಃ ಹಾನಿ ಮತ್ತು 295 ಎಕರೆ ಭತ್ತ  ಹಾನಿಯಾಗಿದ್ದು  ಒಟ್ಟು ರೂ.18.93 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾಮನೆಗೆ ತೀವ್ರ ಹಾನಿ, 10 ಕಚ್ಚಾ ಮನೆಗಳಿಗೆ  ಭಾಗಶಃ ಹಾನಿ ಯಾಗಿದ್ದು,   30 ಎಕರೆ ಅಡಿಕೆ, 38 ಎಕರೆ ಬಾಳೆ, 20 ಎಕರೆ ಪಪ್ಪಾಯಿ ಬೆಳೆ ಹಾನಿಯಾಗಿದ್ದು,  1 ಎತ್ತು ಮೃತ ಪಟ್ಟಿದ್ದು ಒಟ್ಟು ರೂ.29.87 ಲಕ್ಷ ನಷ್ಟ ಸಂಭವಿಸಿದೆ. 

error: Content is protected !!