ರಾಜಕಾಲುವೆಗಳ ಹೂಳು ತೆಗೆಸಲು ಎಸ್ಸೆಸ್, ಎಸ್ಸೆಸ್ಸೆಂ ಸೂಚನೆ

ರಾಜಕಾಲುವೆಗಳ ಹೂಳು ತೆಗೆಸಲು ಎಸ್ಸೆಸ್, ಎಸ್ಸೆಸ್ಸೆಂ ಸೂಚನೆ - Janathavaniದಾವಣಗೆರೆ, ಮೇ 24- ಮಳೆಗಾಲ ಪ್ರಾರಂಭವಾಗುವು ದಕ್ಕೂ ಮುನ್ನ ನಗರದಲ್ಲಿರುವ ಎಲ್ಲಾ ರಾಜಕಾಲುವೆಗಳಲ್ಲಿರುವ ಹೂಳನ್ನು ತೆರವು ಗೊಳಿಸಿ ಎಂದು ಶಾಸಕರುಗಳಾದ ಶಾಮನೂರು ಶಿವಶಂಕರಪ್ಪ  ಮತ್ತು ಎಸ್.ಎಸ್.ಮಲ್ಲಿಕಾರ್ಜುನ್ ಅವರುಗಳು ಮಹಾನಗರ ಪಾಲಿಕೆಯ ಆಯುಕ್ತರಿಗೆ ನಿರ್ದೇಶಿಸಿದ್ದಾರೆ.

ನಗರದಲ್ಲಿ ನಿನ್ನೆ ಬಿರುಗಾಳಿ ಮತ್ತು ಗುಡುಗು ಸಹಿತ ಧಾರಾಕಾರ  ಮಳೆಯಿಂದಾಗಿ ರೈತರು ಮತ್ತು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು, ನಗರದ ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳಲ್ಲಿ  ನೀರು ತುಂಬಿಕೊಂಡಿದ್ದು, ಸದರಿ ಪ್ರದೇಶದಲ್ಲಿ ವಾಸಿಸುವ ಜನರು ಹರಸಾಹಸ ಪಡುವಂತಾಗಿದೆ. 

 ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು. ಅದೇ ರೀತಿ ಮಳೆಯಿಂದಾಗಿ ರೈತರು ಬೆಳೆದ ಭತ್ತ, ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಹಾಳಾಗಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದು ಈ ಬಗ್ಗೆಯೂ ಸಂಬಂಧಿಸಿದ ಅಧಿಕಾರಿಗಳು ವರದಿ ನೀಡುವಂತೆ ಅವರು ತಿಳಿಸಿದ್ದಾರೆ.

error: Content is protected !!