ಹೊನ್ನಾಳಿ, ಮೇ 26- ನಾಳೆ ದಿನಾಂಕ 27ರ ಶನಿವಾರ ನಡೆಸಲು ತೀರ್ಮಾನಿಸಿದ್ದ ಕಾಂಗ್ರೆಸ್ ಪಕ್ಷದ ಅಭಿನಂದನಾ ಸಭೆಯನ್ನು ಭಾನುವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಿರುವುದಾಗಿ ಶಾಸಕ ಡಿ.ಜಿ. ಶಾಂತನಗೌಡ ತಿಳಿಸಿದ್ದಾರೆ.
ಶನಿವಾರದ ಸಂಪುಟ ವಿಸ್ತರಣೆ ಹಾಗೂ ಪ್ರಮಾಣ ವಚನ ಸಮಾರಂಭದ ಹಿನ್ನೆಲೆಯಲ್ಲಿ ಈ ಹಿಂದೆ ತೀರ್ಮಾನಿಸಿದಂತೆ ಹಿರೇಕಲ್ಮಠದ ಸಮುದಾಯದ ಭವನದಲ್ಲಿ ಸಭೆ ನಡೆಯಲಿದ್ದು, ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮತದಾರರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅವರು ಕೋರಿದ್ದಾರೆ.