ನಾಳೆ ನಗರಕ್ಕೆ ಸಚಿವ ಎಸ್ಸೆಸ್ಸೆಂ

ನಾಳೆ ನಗರಕ್ಕೆ ಸಚಿವ ಎಸ್ಸೆಸ್ಸೆಂ - Janathavaniಬೃಹತ್ ಮೆರವಣಿಗೆ, ಬೈಕ್ ರ‍್ಯಾಲಿ : ಹೆಚ್.ಬಿ. ಮಂಜಪ್ಪ

ದಾವಣಗೆರೆ, ಜೂ.1-  ಗಣಿ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು 3ನೇ ಬಾರಿಗೆ  ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ನಾಡಿದ್ದು ದಿನಾಂಕ 3 ರ ಶನಿವಾರ   ನಗರಕ್ಕೆ ಆಗಮಿಸಲಿದ್ದಾರೆ  ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ತಿಳಿಸಿದ್ದಾರೆ.

ಅಂದು ಮಧ್ಯಾಹ್ನ 3 ಗಂಟೆಗೆ  ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ  ಅವರನ್ನು ಸ್ವಾಗತಿಸಿ, ಬೈಕ್ ರ‍್ಯಾಲಿ ಮೂಲಕ  ನಗರದ ವಿವಿಧ ಕಡೆಗಳಲ್ಲಿ ಮೆರವಣಿಗೆ ನಡೆಸಲಾಗುವುದು.

ಈ ಮೆರವಣಿಗೆಯೂ  ಜಿಲ್ಲಾ ಪಂಚಾಯತ್  ಮುಂಭಾಗ ಪ್ರಾರಂಭವಾಗಿ ಗಣೇಶ ದೇವಸ್ಥಾನ, ಹದಡಿ ರಸ್ತೆ, ಐ.ಟಿ.ಐ. ಕಾಲೇಜ್ ಮುಂಭಾಗದಿಂದ 60 ಅಡಿ ರಸ್ತೆಯ ಮುಖಾಂತರ ನಿಟುವಳ್ಳಿ ದುರ್ಗಾಂಬಿಕಾ ಸರ್ಕಲ್, ನಿಟುವಳ್ಳಿ ಆರ್.ಎಸ್. ಶೇಖರಪ್ಪನವರ ಮನೆ ಮುಂಭಾಗ, ಕೊಂಡಜ್ಜಿ ಬಸಪ್ಪ ಸರ್ಕಲ್ ಹದಡಿ ರಸ್ತೆ, ವಿದ್ಯಾರ್ಥಿ ಭವನ ಸರ್ಕಲ್, ಹದಡಿ ರಸ್ತೆ, ಕೆ.ಇ.ಬಿ. ಸರ್ಕಲ್, (ಅಂಬೇಡ್ಕರ್ ಸರ್ಕಲ್) ಹದಡಿ ರಸ್ತೆ, ಜಯದೇವ ಸರ್ಕಲ್, ಮಹಾನಗರ ಪಾಲಿಕೆ ಕಛೇರಿ ಮುಂಭಾಗದಿಂದ ಅರುಣ ಸರ್ಕಲ್ ಮುಖಾಂತರ ರೈಲ್ವೆಗೇಟ್ ಮುಖಾಂತರ ಹೊಂಡದ ಸರ್ಕಲ್, ದುರ್ಗಾಂಬಿಕ ದೇವಸ್ಥಾನ ಶಿವಾಜಿ ವೃತ್ತ, ಹಗೇದಿಬ್ಬ ಸರ್ಕಲ್, ಆಜಾದ್‍ನಗರ ಮುಖ್ಯರಸ್ತೆ, ಅರಳಿಮರ ಸರ್ಕಲ್, ವೆಂಕಟೇಶ್ವರ ಸರ್ಕಲ್‍ಗೆ ಮುಕ್ತಾಯವಾಗಲಿದೆ.

ಈ ಮೆರವಣಿಗೆಯಲ್ಲಿ ಶಾಸಕರುಗಳಾದ ದಕ್ಷಿಣದ   ಶಾಮನೂರು ಶಿವಶಂಕರಪ್ಪ, ಮಾಯಕೊಂಡದ ಕೆ.ಎಸ್.ಬಸವಂತಪ್ಪ, ಚನ್ನಗಿರಿಯ ಶಿವಗಂಗಾ ಬಸವರಾಜ್, ಹೊನ್ನಾಳಿಯ ಡಿ.ಜಿ.ಶಾಂತನಗೌಡ, ಜಗಳೂರಿನ ದೇವೇಂದ್ರಪ್ಪ, ಹರಪನಹಳ್ಳಿಯ ಶ್ರೀಮತಿ ಲತಾ ಮಲ್ಲಿಕಾರ್ಜುನ್, ಮಾಜಿ ಶಾಸಕ ಎಸ್.ರಾಮಪ್ಪ,  ಹರಿಹರದ ನಂದಿಗಾವಿ ಶ್ರೀನಿವಾಸ್,  ಅರಸೀಕೆರೆ ಕೊಟ್ರೇಶ್  ಭಾಗವಹಿಸುವರು.

error: Content is protected !!