ನಗರಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ

ದಾವಣಗೆರೆ, ಜೂ.3- ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ನಾಡಿದ್ದು ದಿನಾಂಕ 5ರ ಸೋಮವಾರ ನಗರಕ್ಕೆ ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬಾಪೂಜಿ ಎಂ.ಬಿ.ಎ. ಗ್ರೌಂಡ್‌ಗೆ ಆಗಮಿಸಲಿರುವ ಸಿದ್ದರಾಮಯ್ಯ, ಮಧ್ಯಾಹ್ನ 12.30ಕ್ಕೆ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

error: Content is protected !!