ಹರಿಹರ ತಾಲ್ಲೂಕಿನ ಭಾನುವಳ್ಳಿ ಗ್ರಾಮದ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದವರು ಇಂದು ಬೆಳಿಗ್ಗೆ 8 ಗಂಟೆಗೆ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸಿ, ನಿರಂತರ ಧರಣಿ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ತಾಲ್ಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ತಿಳಿಸಿದ್ದಾರೆ. ಗ್ರಾಮದ ಎ.ಕೆ.ಕಾಲೋನಿಯಲ್ಲಿ ಅಂದಾಜು 150ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದಾರೆ. ಒಂದು ಚಿಕ್ಕ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಕುಟುಂಬಗಳಿವೆ. ಈ ಮನೆಗಳಿಗೆ ಸರಿಯಾದ ಬಾಗಿಲು, ಕಿಟಕಿ, ಶೌಚಾಲಯ ಇತರೆ ಮೂಲ ಸೌಕರ್ಯಗಳಿಲ್ಲ. ಗ್ರಾಮದ ಯಾವುದಾದರು ಒಂದು ಸರ್ಕಾರಿ ಜಮೀನಿನಲ್ಲಿ ಈ ನಿವಾಸಿಗಳಿಗೆ ವಸತಿ ಸೌಲಭ್ಯ ಒದಗಿಸಲು ಆಗ್ರಹಿಸಿ ತಹಶೀಲ್ದಾರರಿಗೆ ಮನವಿ ಅರ್ಪಣೆ ಮಾಡಿದ ನಂತರ ನಗರದ ಗಾಂಧಿ ವೃತ್ತದಲ್ಲಿ ನಿರಂತರ ಧರಣಿಯನ್ನು ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
September 20, 2024