ಅಕ್ಕಮಹಾದೇವಿ ಸಮಾಜದಿಂದ ಅಥಣಿ ವೀರಣ್ಣ ಅವರಿಗೆ ನಾಳೆ ಸನ್ಮಾನ

ಅಕ್ಕಮಹಾದೇವಿ ಸಮಾಜದಿಂದ ಅಥಣಿ ವೀರಣ್ಣ ಅವರಿಗೆ ನಾಳೆ ಸನ್ಮಾನ - Janathavaniದಾವಣಗೆರೆ, ಜೂ.6- ನಗರದ ಶ್ರೀ ಅಕ್ಕಮಹಾದೇವಿ ಸಮಾಜದ ವತಿಯಿಂದ ಶ್ರೀ ಅಕ್ಕಮಹಾದೇವಿ ಸಮಾಜದ ಸಹಾಯ ನಿಧಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಾಡಿದ್ದು ದಿನಾಂಕ 8ರ ಗುರುವಾರ ಸಂಜೆ 4 ಗಂಟೆಗೆ ಶ್ರೀಮತಿ ಮೋತಿ ಚನ್ನಬಸಮ್ಮ ವೀರಪ್ಪ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. 

ಶ್ರೀ ಅಕ್ಕಮಹಾದೇವಿ ಸಮಾಜದ ಅಧ್ಯಕ್ಷರಾದ ಶ್ರೀಮತಿ ಕೆ.ಕೆ.ಸುಶೀಲಮ್ಮ ಅವರ ಅಧ್ಯಕ್ಷತೆಯಲ್ಲಿ ಏರ್ಪಾಡಾಗಿರುವ ಈ ಕಾರ್ಯಕ್ರಮದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜನಾಗಿರುವ ಹಿರಿಯ ಲೆಕ್ಕ ಪರಿಶೋಧಕ ಅಥಣಿ ಎಸ್. ವೀರಣ್ಣ ಅವರನ್ನು ಸನ್ಮಾನಿಸಲಾಗುತ್ತದೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇ.ಎಂ. ಮಂಜುನಾಥ, ಸಾರ್ವಜನಿಕ ಶಿಕ್ಷಣ ಇಲಾಖೆ ವಿಜ್ಞಾನ ವಿಷಯ ಪರಿವೀಕ್ಷಕರಾದ ಶ್ರೀಮತಿ ಆರ್.ಬಿ. ವಸಂತ ಕುಮಾರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಇದೇ ಸಂದರ್ಭಲ್ಲಿ ಶ್ರೀ ಅಕ್ಕಮಹಾದೇವಿ ಸಮಾಜದ ಹಿರಿಯರಾದ ಶ್ರೀಮತಿ ಜಯಮ್ಮ ನೀಲಗುಂದ ಅವರಿಂದ ಚಿಂತನ – ಮಂತನ ಕಾರ್ಯಕ್ರಮ ನಡೆಯಲಿದೆ.

error: Content is protected !!