ಜಿಲ್ಲಾ ಪಂಚಮಸಾಲಿ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ

ದಾವಣಗೆರೆ, ಜೂ.6- ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ  ಜಿಲ್ಲಾ ಘಟಕದ ವತಿಯಿಂದ 2023ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳಿಂದ `ಪ್ರತಿಭಾ ಪುರಸ್ಕಾರ’ಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೇಕಡಾ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳು ಸಮಾಜದ ಕಛೇರಿಯಲ್ಲಿ ಅಥವಾ  ವೆಬ್‍ಸೈಟ್ www.panchamasali.orgನಲ್ಲಿ ಅರ್ಜಿಯನ್ನು ಪಡೆದು, ಇದೇ ದಿನಾಂಕ 25ರೊಳಗಾಗಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ (08192) 222008 ಸಂಪರ್ಕಿಸಬಹುದು ಎಂದು ಸಮಾಜದ ಜಿಲ್ಲಾಧ್ಯಕ್ಷ ಬಿ.ಸಿ.ಉಮಾಪತಿ ತಿಳಿಸಿದ್ದಾರೆ. 

error: Content is protected !!