ಎಂ.ಎಸ್‌.ಬಿ. ಕಾಲೇಜಿನಿಂದ ಕುಣೆಬೆಳಕೆರೆಯಲ್ಲಿ ಇಂದು ಎನ್ನೆಸ್ಸೆಸ್ ಶಿಬಿರ

ದಾವಣಗೆರೆ ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಮಾ.ಸ.ಬ. ಕಲಾ ಮತ್ತು ವಾಣಿಜ್ಯ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ವಾರ್ಷಿಕ ವಿಶೇಷ ಶಿಬಿರ ‘ಸಾಮಾಜಿಕ ಸಾಮರಸ್ಯದೆಡೆಗೆ ಯುವ ಜನತೆ’ ಕಾರ್ಯಕ್ರಮವು ಇಂದಿನಿಂದ 17ರವರೆಗೆ  ಹರಿಹರ ತಾಲ್ಲೂಕಿನ ಕುಣಿಬೆಳಕೆರೆಯಲ್ಲಿ ನಡೆಯಲಿದೆ.

ಇಂದು ಸಂಜೆ 5 ಗಂಟೆಗೆ ಉದ್ಘಾಟನಾ ಕಾರ್ಯ ಕ್ರಮಕ್ಕೂ ಮುನ್ನ ಗ್ರಾಮ ಪಥ ಸಂಚಲನ ನಡೆಯಲಿದ್ದು, 6 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮವು ಶಾಲೆಯ ಭೂದಾನಿ ಆನೆಕೊಂಡದ ಬಸವರಾಜಪ್ಪ ಇವರ ಅಧ್ಯಕ್ಷತೆಯಲ್ಲಿ ಜರುಗಲಿದೆ. 

ಕಾಲೇಜಿನ ಪ್ರಾಂಶುಪಾಲೆ ಪ್ರೊ. ಜಿ.ಸಿ. ನೀಲಾಂಬಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಯೋಜನಾಧಿಕಾರಿ ಡಾ. ಅಶೋಕ್ ಕುಮಾರ್ ಪಾಳೇದ್, ಪ್ರೊ. ಸಿ.ಹೆಚ್. ಮುರುಗೇಂದ್ರಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷೆ ಬಸೀರಾ ಬಾನು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

error: Content is protected !!