ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕುಂದುವಾಡ ಕೆರೆ ವಾಯುವಿಹಾರ ಬಳಗ ಮತ್ತು ಸಪ್ತಗಿರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ `ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ’ ಕಾರ್ಯಕ್ರಮವನ್ನು ಕುಂದುವಾಡ ಕೆರೆಯ ಬಳಿ ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಎನ್.ಹೆಚ್. ಜಗನ್ನಾಥ್, ಮಹಾನಗರ ಪಾಲಿಕೆಯ ಸದಸ್ಯರಾದ ಶಿಲ್ಪಾ ಜಯಪ್ರಕಾಶ್, ಅತಿಥಿಗಳಾಗಿ ಡಾ. ಸುರೇಂದ್ರ, ಶಾಂತಾಭಟ್, ಶ್ರೀರಾಮಮೂರ್ತಿ, ಜೆ. ಈಶ್ವರ್ಸಿಂಗ್ ಕವಿತಾಳ್ ಉಪಸ್ಥಿತರಿರುವರು.
July 5, 2024