ನಗರದಲ್ಲಿ ಇಂದು ಪುಟ್ಟರಾಜ ಸೇವಾ ಸಮಿತಿ ಜಿಲ್ಲಾ ಘಟಕ ಉದ್ಘಾಟನೆ

ದಾವಣಗೆರೆ, ಜು. 11- ಡಾ.ಪಂ. ಪುಟ್ಟರಾಜ ಸೇವಾ ಸಮಿತಿಯ ಜಿಲ್ಲಾ ಘಟಕ ಹಾಗೂ ಮಹಿಳಾ ಘಟಕದ ಉದ್ಘಾಟನೆ, ಗುರು ಸೇವಾ ದೀಕ್ಷಾ ಸಮಾರಂಭವನ್ನು ನಾಳೆ ದಿನಾಂಕ 12ರ ಸೋಮವಾರ ಸಂಜೆ 5.30ಕ್ಕೆ ನಗರದ ಶಿವಯೋಗಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ನೂತನ ಅಧ್ಯಕ್ಷ ಪಿ.ಬಿ. ವಿನಾಯಕ ತಿಳಿಸಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಸಾನ್ನಿಧ್ಯವನ್ನು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ವಹಿಸಲಿದ್ದಾರೆ. ವರ್ತಕ ಅಣಬೇರು ಮಂಜಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀ ವೇ.ಚನ್ನವೀರಸ್ವಾಮಿ ಹಿರೇಮಠ (ಕಡಣಿ) ಸಮಾರಂಭ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಎಸ್ಪಿ ಅರುಣ್ ಕುಮಾರ್ ಕೆ., ಪಾಲಿಕೆ ಆಯುಕ್ತರಾದ ರೇಣುಕಾ, ಮೇಯರ್ ವಿನಾಯಕ ಪೈಲ್ವಾನ್, ಲೆಕ್ಕ ಪರಿಶೋಧಕ ಅಥಣಿ ವೀರಣ್ಣ, ಮಾಜಿ ಮೇಯರ್ ಎಸ್.ಟಿ. ವೀರೇಶ್ ಆಗಮಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಪುಟ್ಟರಾಜಗುರು ವಚನ ಪ್ರಭಾ ವಚನ ವಿಶ್ಲೇಷಣೆ ಸಂಕಲನ ಲೋಕಾರ್ಪಣೆಗೊಳಿಸಲಾಗುವುದು.

ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಸತೀಶ್ ಧಾರವಾಡ ಮಾತನಾಡಿ, ಸಂಗೀತ ಕ್ಷೇತ್ರದಲ್ಲಿ ಆಸಕ್ತಿ ಇರುವವರನ್ನು ಗುರುತಿಸಿ, ಅವರಿಗೊಂದು ವೇದಿಕೆ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಘಟಕಗಳನ್ನು ಆರಂಭಿಸಲಾಗುತ್ತಿದೆ. ಸೇವಾ ಮನೋಭಾವ ಇದ್ದವರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಪುಷ್ಪ ಹೆನ್.ಎಸ್. ಮಮತಾ ನಾಗರಾಜ್, ರಾಜಶ್ರೀ ಆರ್.ಎಸ್., ಶಶಿಕಲಾ ಹೆಚ್.ಎಸ್., ಶಾನ್ವಿ ಆರ್. ಉಪಸ್ಥಿತರಿದ್ದರು.

error: Content is protected !!