ಹೊನ್ನಾಳಿ, ಜೂ. 13- ಕುಡಿದ ಅಮಲಿನಲ್ಲಿ ಕುತ್ತಿಗೆ ಕೊಯ್ದುಕೊಂಡು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲ್ಲೂಕಿನ ಅರಕೆರೆ ಗ್ರಾಮದ ಮನೆಯೊಂದರಲ್ಲಿ ನಿನ್ನೆ ನಡೆದಿದೆ. ಪ್ರಕಾಶ್ (35) ಮೃತ ವ್ಯಕ್ತಿಯಾಗಿದ್ದು, ಅತಿಯಾಗಿ ಮದ್ಯಪಾನ ಮಾಡುತ್ತಾ, ಆರೋಗ್ಯ ಹಾಳು ಮಾಡಿಕೊಂಡು ಮಾನಸಿಕ ಅಸ್ವಸ್ಥನಾಗಿದ್ದ ಈತ, ಕುಡಿದ ಅಮಲಿನಲ್ಲಿ ಕುಡುಗೋಲಿನಿಂದ ಕುತ್ತಿಗೆ ಕೊಯ್ದುಕೊಂಡು ಮೃತಪಟ್ಟಿದ್ದಾನೆ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
July 24, 2024