ವಿಕಲಚೇತನರಿಂದ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ, ಜೂ.13- ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಜಗಳೂರು ತಾಲ್ಲೂಕಿನ ಗುತ್ತಿದುರ್ಗ, ಮುಸ್ಟೂರು, ಚನ್ನಗಿರಿ ತಾಲ್ಲೂಕಿನ ನಲ್ಲೂರು, ಹೆಬ್ಬಳಗೆರೆ, ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ, ಬನ್ನಿಕೋಡು ಗ್ರಾಮ ಪಂಚಾಯಿತಿಗಳಲ್ಲಿ ಪುನರ್ವಸತಿ ಕಾರ್ಯಕರ್ತರ ಕೆಲಸ ಖಾಲಿ ಇದ್ದು ಮಾಸಿಕ ರೂ. 9,000ಗಳ ಗೌರವ ಧನ ನೀಡಲಾಗುವುದು. ಆಸಕ್ತರು 18 ರಿಂದ 45 ವರ್ಷ  ವಯೋಮಾನದ,  ಆಯಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಇದೇ ದಿನಾಂಕ 30  ಅರ್ಜಿ ಸಲ್ಲಿಸಲು ಕೊನೆಯ  ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ಎಂ.ಸಿ.ಸಿ. ‘ಬಿ’ ಬ್ಲಾಕ್ ದಾವಣಗೆರೆ ದೂ.08192-263936 ಮತ್ತು 08192-263939ಗೆ ಸಂಪರ್ಕಿಸಬಹುದು. 

error: Content is protected !!