ದಾವಣಗೆರೆ, ಜೂ. 18- ಹೆಬ್ಬಾಳು ಟೋಲ್ಗೇಟ್ ಬಳಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಢಿಕ್ಕಿಯಾಗಿ ಸ್ಥಳದಲ್ಲಿಯೇ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.
ಬೆಂಗಳೂರು ದೊಮ್ಮಸಂದ್ರದ ಬೂರುಕುಂಟೆ ಗ್ರಾಮದ ವೆಂಕಟೇಶ್ (40) ಮೃತ ವ್ಯಕ್ತಿ. ಬೆಂಗಳೂರಿನಿಂದ ಗೋವಕ್ಕೆ ಕೋರಿಯರ್ ಲೋಡ್ ತುಂಬಿಕೊಂಡು ಹೋಗಿ ವಾಪಾಸ್ ಬೆಂಗಳೂರಿಗೆ ಹೋಗುವಾಗ ಈ ಅಪಘಾತವಾಗಿದೆ.
ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.