ಭಾರತ ಸೇವಾದಳ ಭವನದಲ್ಲಿ ಇಂದು ಯೋಗ ದಿನಾಚರಣೆ

ದಾವಣಗೆರೆ ಭಾರತ ಸೇವಾದಳ ಭವನದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ವಿಶ್ವ ಯೋಗ ದಿನಾಚರಣೆ ಹಾಗೂ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾರತ ಸೇವಾದಳ ಜಿಲ್ಲಾಧ್ಯಕ್ಷ ಪ್ರೊ. ಹೆಚ್. ಚನ್ನಪ್ಪ ಪಲ್ಲಾಗಟ್ಟೆ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪರಿಸರ ಅಧಿಕಾರಿ ಡಾ. ಹೆಚ್. ಲಕ್ಷ್ಮೀಕಾಂತ ಕಾರ್ಯಕ್ರಮ ಉದ್ಘಾಟಿಸಲಿದ್ದು, ದಾವಣಗೆರೆ ವಿವಿ ವಿಶ್ರಾಂತ ಕುಲಸಚಿವ ಪ್ರೊ. ಎನ್.ಕೆ. ಗೌಡ ಅತಿಥಿಯಾಗಿ ಭಾಗವಹಿಸಲಿದ್ದಾರೆ. 

error: Content is protected !!