ಎಸ್ಸೆಸ್ ಜನಕಲ್ಯಾಣ ಟ್ರಸ್ಟ್‌ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ

ದಾವಣಗೆರೆ, ಜೂ.23- ಡಾ.ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ವತಿಯಿಂದ 2023-24 ನೇ ಸಾಲಿಗೆ ರಾಜ್ಯದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಡಾ.ಅಥಣಿ ವೀರಣ್ಣ ತಿಳಿಸಿದ್ದಾರೆ.

ಟ್ರಸ್ಟ್‌ನಿಂದ ಕಳೆದ 11 ವರ್ಷಗಳಿಂದ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು, ಹಿಂದಿನ ವರ್ಷ ಸುಮಾರು 900 ಜನ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ. 

ಈ ಬಾರಿ ಐ.ಟಿ.ಐ, ಡಿಪ್ಲೋಮಾ, ಪದವಿ ಕಾಲೇಜು, ವೃತ್ತಿ ಶಿಕ್ಷಣ ಕಾಲೇಜು, ಕಾನೂನು ಕಾಲೇಜು, ಮ್ಯಾನೇಜ್‌ಮೆಂಟ್ ಮತ್ತು ಇತರೆ ವೃತ್ತಿ ಶಿಕ್ಷಣ ಕಾಲೇಜುಗಳಲ್ಲಿ 2023-24 ರ ಶೈಕ್ಷಣಿಕ ಅವಧಿಯಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಆಯಾ ಕಾಲೇಜುಗಳ ವಾರ್ಷಿಕ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.

ವಿದ್ಯಾರ್ಥಿ ವೇತನವನ್ನು ನಿರೀಕ್ಷಿಸುವ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾನ್ವಿತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಯಾ ಶಾಲಾ – ಕಾಲೇಜುಗಳ ಮುಖ್ಯಸ್ಥರ ಕ್ರಮಬದ್ಧವಾದ ಅರ್ಜಿಗಳ ಮೂಲಕ ಪ್ರಮಾಣ ಪತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ನಿಗದಿತ ಅರ್ಜಿಯನ್ನು ಆನ್‌ಲೈನ್ ಮುಖಾಂತರ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗಾಗಿ ಟ್ರಸ್ಟ್‌ನ ಅಂತರ್ಜಾಲ ತಾಣ http://www.ssjanakalyatrust.org/ ವನ್ನು ಮಾತ್ರ ಸಂಪರ್ಕಿಸಲು ಸೂಚಿಸಲಾ ಗಿದೆ. ಯಾವುದೇ ಪತ್ರ ವ್ಯವಹಾರ ಅಥವಾ ದೂರವಾಣಿ ಕರೆಗಳಿಗೆ ಉತ್ತರಿ ಸಲಾಗುವುದಿಲ್ಲ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 16-07-2023 ಕೊನೆಯ ದಿನವಾಗಿರುತ್ತದೆ ಎಂದು ಅಥಣಿ ವೀರಣ್ಣ ತಿಳಿಸಿದ್ದಾರೆ.

error: Content is protected !!