ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಂಗ ಳೂರಿನಿಂದ ದಾವಣಗೆರೆ ಮಾರ್ಗವಾಗಿ ಧಾರವಾಡ ಸಂಚಾರಕ್ಕೆ ಸಜ್ಜಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಿಂದ ವರ್ಚ್ಯುವಲ್ ಮೂಲಕ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ನೈರುತ್ಯ ರೈಲ್ವೆ ಮುಖ್ಯ ವಾಣಿಜ್ಯ ನಿರೀಕ್ಷಕ ಬಿ.ವಿ. ರಾಕೇಶ್ ತಿಳಿಸಿದ್ದಾರೆ.
ಧಾರವಾಡದಿಂದ ಹೊರಟು ಮಧ್ಯಾಹ್ನ 1 ಗಂಟೆಗೆ ದಾವಣಗೆರೆ ಆಗಮಿಸಲಿದ್ದು, ಈ ಸಂದ ರ್ಭದಲ್ಲಿ ದಾವಣಗೆರೆ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅತ್ಯಾಧುನಿಕ ಅತಿ ವೇಗ ಹಾಗೂ ವಿಶ್ವಮಟ್ಟದ ಸವಲತ್ತುಗಳಿಂದ ರೂಪಿಸಲಾಗಿರುವ ಭಾರತೀಯ ರೈಲ್ವೆಯ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ನಿತ್ಯ ಬೆಂಗಳೂರು-ಧಾರವಾಡ ಮಧ್ಯೆ ಸಂಚಾರ ಮಾಡಲಿದ್ದು, ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿ ಯಲ್ಲಿ ನಿಲುಗಡೆ ಹೊಂದಿದೆ ಎಂದು ಅವರು ವಿವರಿಸಿದ್ದಾರೆ.