ಪತ್ರಕರ್ತರ ಕುಟುಂಬಕ್ಕೆ ಉಚಿತ ಆರೋಗ್ಯ ತಪಾಸಣೆ

ದಾವಣಗೆರೆ, ಜೂ. 30- ಪತ್ರಕರ್ತರು ಮತ್ತವರ ಕುಟುಂಬ ವರ್ಗದವರಿಗೆ ನಗರದ ಪ್ರೀತಿ ಆರೈಕೆ ಟ್ರಸ್ಟ್ ವತಿಯಿಂದ ನಾಳೆ ದಿನಾಂಕ 1 ರಿಂದ 10 ರವರೆಗೆ ಹತ್ತು ದಿನಗಳ ಕಾಲ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆ ಮಖ್ಯಸ್ಥ ಡಾ.ಟಿ.ಜಿ. ರವಿಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜು.1 ರಂದು ಬೆಳಿಗ್ಗೆ 10 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆ ನಡೆಯಲಿದ್ದು, ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಶಾಸಕ ಟಿ. ಗುರುಸಿದ್ಧನಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ  ಸಿ. ವರದರಾಜ್, ಖಜಾಂಚಿ ಮಧು ನಾಗರಾಜ್ ಮತ್ತಿತರರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪ್ರೀತಿ ಆರೈಕೆ ಟ್ರಸ್ಟ್‌ನ ಟ್ರಸ್ಟಿ ಚಿರಂತನ್ ಟಿ. ರವಿಕುಮಾರ್, ಸಂಯೋಜಕ ವಿರಾಜ್ ಕೆ. ಅಣಜಿ ಉಪಸ್ಥಿತರಿದ್ದರು.

error: Content is protected !!