ನಗರದಲ್ಲಿ ಇಂದು ಯಕ್ಷಗಾನ ಪ್ರದರ್ಶನ

ಶಿವದೂತ ಪಂಜುರ್ಲಿ ಯಕ್ಷಗಾನ ಪ್ರದರ್ಶನದ ಉದ್ಘಾಟನಾ ಸಮಾರಂಭವು ಇಂದು ಸಂಜೆ 6 ಗಂಟೆಗೆ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಸವಿಡೈನ್‌ ಮಹೇಶ್‌ ಶೆಟ್ಟಿ ಗೆಳೆಯರ ಬಳಗ, ಪ್ರೇರಣಾ ಯುವ ಸಂಸ್ಥೆ, ಇವರ ಸಂಯುಕ್ತಾಶ್ರ ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವ ನ್ನು ಡಾ. ಎಂ.ಜಿ. ಈಶ್ವರಪ್ಪ ಉದ್ಘಾಟಿಸುವರು. ಮಲ್ಯಾಡಿ ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಎಸ್‌.ಟಿ. ವೀರೇಶ್‌, ದಿನೇಶ್‌ ಕೆ. ಶೆಟ್ಟಿ, ಕೊಕ್ಕರ್ಣೆ ಸದಾಶಿವ ಅಮೀನ್, ಸಾಲಿಗ್ರಾಮ ಗಣೇಶ್‌ ಶೆಣೈ, ಕೆ.ಹೆಚ್‌. ಮಂಜುನಾಥ್‌ ಆಗಮಿಸುವರು.

error: Content is protected !!