ದಾವಣಗೆರೆ, ಜು.9- ಆರ್.ಎಲ್. ಕಾನೂನು ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಅಪರಾಧಿಕ ಮತ್ತು ವಿಧಿ ವಿಜ್ಞಾನ ವಿಭಾಗದ ವತಿಯಿಂದ ‘ಫೋರೆನ್ಸಿಕ್ ಎವಿಡೆನ್ಸ್ ಇನ್ ಕೋರ್ಟ್ ಟ್ರಯಲ್ಸ್’ ವಿಷಯದ ಬಗ್ಗೆ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ನಾಡಿದ್ದು ದಿನಾಂಕ 11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ದಾವಿವಿ ಕುಲಪತಿ ಡಾ. ಬಿ.ಡಿ. ಕುಂಬಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಿರ್ದೇಶಕ ಪ್ರೊ. ದಿನೇಶ್ ರಾವ್, ನಿವೃತ್ತ ಪ್ರಾಧ್ಯಾಪಕ
ಡಾ. ನಟರಾಜ್ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳುವರು. ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಎಸ್. ಯತೀಶ್ ಅಧ್ಯಕ್ಷತೆ ವಹಿಸುವರು.
ಅದೇ ದಿನ ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಎಸ್. ಯತೀಶ್ ಅಧ್ಯಕ್ಷತೆ ವಹಿಸುವರು. ನಿವೃತ್ತ ಪ್ರಾಧ್ಯಾಪಕ ಡಾ. ನಟರಾಜ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.