ದಾವಣಗೆರೆ, ಜು.9- ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಘಟಕದ ವತಿಯಿಂದ 2023ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಜಿಲ್ಲೆಯ ಪಂಚಮಸಾಲಿ ಸಮಾಜದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ `ಸ್ವಾಭಿಮಾನ ಪ್ರತಿಭಾ ಪುರಸ್ಕಾರ’ಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳು ಸಮಾಜದ ಕಛೇರಿಯಲ್ಲಿ ಅಥವಾ ಸಮಾಜದ ಅಂತರ್ಜಾಲ ವೆಬ್ಸೈಟ್ www.panchama sali.org ನಲ್ಲಿ ಅರ್ಜಿಯನ್ನು ಪಡೆದು, ನಾಳೆಯೊಳಗೆ ಸಲ್ಲಿಸಬೇಕು. ವಿವರಕ್ಕೆ ಸಂಪರ್ಕಿಸಿ : ದೂರವಾಣಿ (08192) 222008.
July 26, 2024