ಬಸವರಾಜ ಪೇಟೆಯ ಶ್ರೀ ಬಸವೇಶ್ವರ, ಶ್ರೀ ವೀರೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಇಂದು ಬೆಳಿಗ್ಗೆ 10.30 ಕ್ಕೆ ದೇವಸ್ಥಾನದ ಆವರಣದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿದೆ. ಪಂಚಮಸಾಲಿ ಜಗದ್ಗುರು ಪೀಠದ ಧರ್ಮದರ್ಶಿ ಬಿ.ಸಿ. ಉಮಾಪತಿ ಕಾರ್ಯಕ್ರಮ ಉದ್ಘಾಟಿಸುವರು. ದೇವಸ್ಥಾನ ಸಮಿತಿ ಅಧ್ಯಕ್ಷ ಮಲ್ಲಪ್ಪ ಬಿರಾದಾರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳು : ಜಗನ್ಲಾಲ್, ವೈ.ಬಿ. ಸತೀಶ್, ಎಸ್.ಜಿ. ಉಳುವಯ್ಯ, ಅಂದನೂರು ಮುರುಗೇಶಪ್ಪ, ಹೆಚ್.ಎಂ. ನಾಗರಾಜ್. ಸನ್ಮಾನ : ಬಿ.ಎಸ್. ಉಮಾ.
July 23, 2024