ಜಿಲ್ಲೆಯಲ್ಲಿ 3950 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯ

ದಾವಣಗೆರೆ, ಜು. 8- ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲೆಯಲ್ಲಿ 3950  ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು 16, 52, 13,281 ಹಣದ ಪರಿಹಾರ ಆಗಿರುತ್ತದೆ ಮತ್ತು 130858 ವ್ಯಾಜ್ಯಪೂರ್ವ ಪ್ರಕರಣಗಳು ಮುಕ್ತಾಯಗೊಂಡು 66,52,05,704 ಹಣದ ಪರಿಹಾರವಾಗಿ ರಾಜೀ ಮೂಲಕ ಮುಕ್ತಾಯಗೊಂಡಿರುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರಣ್ಣವರ ತಿಳಿಸಿದ್ದಾರೆ.

ಹೆಚ್ಚು ಪ್ರಕರಣಗಳು ರಾಜೀಯಾಗಲು ಮತ್ತು ಪಕ್ಷಗಾರರಿಗೆ ಯೋಗ್ಯ ಮಾಹಿತಿ, ಕಾನೂನು ಸಲಹೆ ಮತ್ತು ಮಾಹಿತಿಯನ್ನು ಜಿಲ್ಲೆಯ ನ್ಯಾಯಾಧೀಶರು, ಸಂಧಾನಕಾರರು, ವಕೀಲರು ನೀಡಿದ್ದಾರೆ.

error: Content is protected !!