ನಾಳೆ ಪ್ರಬಂಧ ಸ್ಪರ್ಧೆ

ದಾವಣಗೆರೆ, ಜು.8- ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಆನಗೋಡು ಸಮೀಪದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಉಳುಪಿನಕಟ್ಟೆಯಲ್ಲಿ ಇದೇ ದಿನಾಂಕ 11 ರಂದು ಬೆಳಗ್ಗೆ 10ಕ್ಕೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.

ಜಿಲ್ಲೆಯ ಎಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ `ಭಾರತದ ಜನಸಂಖ್ಯಾ ಹೆಚ್ಚಳಕ್ಕೆ ಕಾರಣಗಳು, ಪರಿಣಾಮಗಳು ಮತ್ತು ಅದಕ್ಕೆ ಪರಿಹಾರೋಪಾಯಗಳು’ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಸಲಾಗುತ್ತದೆ ಎಂದು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಉಪ ನಿರ್ದೇಶಕರು ತಿಳಿಸಿದ್ದಾರೆ. 

error: Content is protected !!