ಜೈನ ಸಮುದಾಯಕ್ಕೆ ವಿಶೇಷ ಅನುದಾನ: ವೀರೇಂದ್ರ ಹೆಗಡೆ ಹರ್ಷ

ದಾವಣಗೆರೆ, ಜು. 13- ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್‌ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವುದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗಡೆ ಸಂತಸ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅನೇಕ ಉಪಯುಕ್ತ ಕಾರ್ಯಕ್ರಮ ನೀಡಿದ್ದು, ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುವ ಮೂಲಕ ಸಿದ್ಧರಾಮಯ್ಯ ಅವರ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆಂದು ವೀರೇಂದ್ರ ಹೆಗಡೆ ತಿಳಿಸಿದ್ದಾರೆ.

error: Content is protected !!