ಜಿ.ಪಂ., ತಾ.ಪಂ. ಚುನಾವಣೆಗೆ ಸನ್ನದ್ಧರಾಗಲು ಕಾರ್ಯಕರ್ತರಿಗೆ ರೇಣುಕಾಚಾರ್ಯ ಕರೆ

ಜಿ.ಪಂ., ತಾ.ಪಂ. ಚುನಾವಣೆಗೆ ಸನ್ನದ್ಧರಾಗಲು ಕಾರ್ಯಕರ್ತರಿಗೆ ರೇಣುಕಾಚಾರ್ಯ ಕರೆ

ಹೊನ್ನಾಳಿ, ಜು.23- ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಯಾವುದೇ ಸಂದರ್ಭದಲ್ಲಿ ಬರಬಹುದು. ಹಾಗಾಗಿ  ಕಾರ್ಯಕರ್ತರು ಆ ಚುನಾವಣೆ  ಎದುರಿಸಲು ಸನ್ನದ್ಧರಾಗಿರಬೇಕೆಂದು ಮಾಜಿ ಶಾಸಕ ಎಂ.ಪಿ.  ರೇಣುಕಾಚಾರ್ಯ  ಕರೆ ನೀಡಿದರು.

ಚೀಲೂರು ಗ್ರಾಮದ ಅಕ್ಕನ ಬಳಗ ಸಮುದಾಯ ಭವನದಲ್ಲಿ ಕೇಂದ್ರ ಸರ್ಕಾರದ ಒಂಭತ್ತನೆಯ ವರ್ಷದ ಸಾಧನೆ ಮತ್ತು ಮಹಾ ಸಂಪರ್ಕ ಅಭಿಯಾನ ಸಮಾರಂಭದಲ್ಲಿ ಬೂತ್ ಮಟ್ಟದ ಕಿಟ್‍ಗಳನ್ನು ವಿತರಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿ ಮಾಡಿದ್ದು, ನಾವು ಅವುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡ ಬೇಕೆಂದ ರೇಣುಕಾ ಚಾರ್ಯ, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಒಂಭತ್ತ ನೆಯ ವರ್ಷದ ಸಾಧನೆ ಮತ್ತು ಮಹಾ ಸಂಪರ್ಕ ಅಭಿಯಾನ ದಲ್ಲಿ ಕರಪತ್ರಗಳನ್ನು ನೀಡುತ್ತಿದ್ದು, ಅವುಗಳನ್ನು ಕಾರ್ಯಕರ್ತರು ಜನರ ಮನೆ ಬಾಗಿಲಿಗೆ ತಲುಪಿಸಿ, ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕೆಂದರು.

ಸಭೆಯನ್ನು ಉದ್ದೇಶಿಸಿ ತಾಲ್ಲೂಕು ಅಧ್ಯಕ್ಷ ಜೆ.ಕೆ.ಸುರೇಶ್ ಮಾತನಾಡಿದರು. ಈ ವೇಳೆ ಮುಖಂಡ ರಾದ ದೊಡ್ಡೇರಿ ರಾಜಪ್ಪ, ಕುಬೇರಪ್ಪ, ಅಜಯ್, ಮಲ್ಲೇಶ್, ಕರಿಬಸಪ್ಪ ಸೇರಿದಂತೆ ಮತ್ತಿತರರಿದ್ದರು.

error: Content is protected !!