ಮುರಾರ್ಜಿ ಕಲಾ ಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ `ಸಂಗೀತ ಸಂಭ್ರಮ’ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಎಸ್. ಬಸವಂತಪ್ಪ, ಜಿಲ್ಲಾಧಿಕಾರಿ ಕೆ.ವಿ.ವೆಂಕಟೇಶ್, ಎಸ್ಪಿ ಡಾ.ಕೆ. ಅರುಣ್, ಮಾಜಿ ಮೇಯರ್ ಎಸ್.ಟಿ. ವೀರೇಶ್, ನಗರಸಭೆ ಮಾಜಿ ಅಧ್ಯಕ್ಷ ಕೆ.ಜಿ. ಶಿವಕುಮಾರ್, ತಾ.ಪಂ. ಮಾಜಿ ಸದಸ್ಯ ಆಲೂರು ನಿಂಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಕಾಲೇಜಿನ ಪ್ರಾಚಾರ್ಯ ಟಿ.ಎ. ಕುಸಗಟ್ಟಿ, ಉಪ ಪ್ರಾಚಾರ್ಯ ಎ.ಆರ್.ಮಂಜಪ್ಪ, ಎಸ್ಡಿಎಂಸಿ ಅಧ್ಯಕ್ಷ ಕುಬೇರಪ್ಪ ಭಾಗವಹಿಸಲಿದ್ದಾರೆ.