ನಗರದಲ್ಲಿ ಇಂದು `ಬಳೆಗಾರ ಹನುಮವ್ವ’ ನಾಟಕ ಪ್ರದರ್ಶನದ ಸಮಾರೋಪ

ದಾವಣಗೆರೆ, ಆ.2- ಶ್ರೀ ಸಂತ ಶರೀಫ ಶಿವಯೋಗಿ ನಾಟ್ಯ ಸಂಘ ತೆಗ್ಗಿಹಳ್ಳಿ ಇವರಿಂದ ನಗರದ ಪಿ.ಬಿ. ರಸ್ತೆಯಲ್ಲಿರುವ ಟಿ.ಎಂ. ವಿನಾಯಕ ಪಿಎಂಪಿಎಸ್ ಕಾಂಪೌಂಡಿನಲ್ಲಿ ನಡೆಯುತ್ತಿರುವ ಮಂಜುನಾಥ್ ಕುಂದೂರ ರಚನೆ, ನಿರ್ದೇಶನದ `ಬಳೆಗಾರ ಹನುಮವ್ವ’ ನಾಟಕದ `101′ ನೇ ಪ್ರದರ್ಶನದ ಸಮಾರೋಪ ಸಮಾರಂಭ ನಾಳೆ ದಿನಾಂಕ 3 ರಂದು ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮಾಲೀಕ ಖತಾಲಸಾಬ್ ಆರ್. ಬಣಗಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮೇಯರ್ ವಿನಾಯಕ ಪೈಲ್ವಾನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್, `ಮಹಾಲಿಂಗ ರಂಗ’ ಪ್ರಶಸ್ತಿ ಪುರಸ್ಕೃತರೂ, ಹಿರಿಯ ಪತ್ರಕರ್ತ ಬಾ.ಮ.ಬಸವರಾಜಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಪಾಲಿಕೆ ಸದಸ್ಯೆ ಆಶಾ ಉಮೇಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್, ಜಿಲ್ಲಾ ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ ಡಾ. ಸಿ. ವರದರಾಜ್, ತಾ.ಪಂ.ಮಾಜಿ ಸದಸ್ಯ ಆಲೂರು ನಿಂಗರಾಜ್, ಶೋಷಿತ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಬಾಡದ ಆನಂದರಾಜ್, ಪತ್ರಕರ್ತ ಕುಣಿಬೆಳಕೆರೆ ಸುರೇಶ್, ಕೆಬಿಆರ್ ಡ್ರಾಮಾ ಕಂಪನಿ ಮಾಲೀಕ ಚಿಂದೋಡಿ  ಚಂದ್ರಧರ, ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಸವರಾಜ ಐರಣಿ, ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆ.ಜಿ. ಯಲ್ಲಪ್ಪ ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು.

ನಾಟಕ ಕಂಪನಿ ವ್ಯವಸ್ಥಾಪಕ ಮಹಾಂತೇಶ್ ಬಿ. ಬಿರಾದಾರ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!