ದಾವಣಗೆರೆ, ಆ. 3- ಮದ್ಯಪಾನ ಮಾಡಲು ತಂದೆ ವೃದ್ದಾಪ್ಯ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ನರಸಿಂಹಪ್ಪ (35)ಎಂಬಾತನಿಗೆ 6 ವರ್ಷ ಜೈಲು ಶಿಕ್ಷೆ 10 ಸಾವಿರ ರೂ. ದಂಡ ವಿಧಿಸಲಾಗಿದೆ ದಂಡ ಕಟ್ಟಲು ತಪ್ಪಿದಲ್ಲಿ 3 ತಿಂಗಳ ಹೆಚ್ಚುವರಿ ಸಾದಾ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇಲಿ ಮಲ್ಲೂರು ಗ್ರಾಮದಲ್ಲಿ ನರಸಿಂಹಪ್ಪನ ಮೇಲೆ ಕೊಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.
ಸರ್ಕಾರದ ಪರ ಸರ್ಕಾರಿ ಅಭಿಯೋಜಕ ಸತೀಶ್ ವಾದ ಮಂಡಿಸಿದ್ದರು. ನ್ಯಾಯಾಧೀಶರಾದ ವಿಜಯಾನಂದ ಅವರು ಪ್ರಕರಣದ ತೀರ್ಪು ನೀಡಿದ್ದಾರೆ.