ನಗರದಲ್ಲಿ ಇಂದು ವನಮಹೋತ್ಸವ

ತುಂಗಭದ್ರಾ ಬಡಾವಣೆಯ ಹತ್ತಿರ ಉದ್ಯಾನವನಕ್ಕಾಗಿ ಮೀಸಲಿಟ್ಟ 4.5 ಎಕರೆ ಭೂ ಪ್ರದೇಶದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ವನಮ ಹೋತ್ಸವ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಏರ್ಪಡಿಲಾಗಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ ಮತ್ತು ಮೆ. ಗ್ರಾಸಿಂ ಇಂಡಸ್ಟ್ರೀಸ್ ಲಿ. ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಿಲ್ಲಾಧಿಕಾರಿ ವೆಂಕಟೇಶ್ ಎಂ.ವಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಎಂ. ಕರೆಣ್ಣವರ, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.

error: Content is protected !!