ದಾವಣಗೆರೆ, ಆ. 22 – ಜಿಲ್ಲಾ ವಕೀಲರ ಸಂಘ, ಆರ್.ಎಲ್.ಕಾನೂನು ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಉಪನ್ಯಾಸ ಕಾರ್ಯಕ್ರಮ ವನ್ನು ನಾಡಿದ್ದು ದಿನಾಂಕ 24ರ ಗುರುವಾರ ಮಧ್ಯಾಹ್ನ 2.30ಕ್ಕೆ ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ರುವ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯ ಮೂರ್ತಿಗಳಾದ ಹೆಚ್.ಎನ್.ನಾಗಮೋಹನ್ ದಾಸ್ ಮಾಡುವರು. ಉಪನ್ಯಾಸ ಮಾಲಿಕೆಗೆ ಚಾಲನೆ ನೀಡುವ ನಾಗಮೋಹನ್ ದಾಸ್ ಅವರು, ಯುವ ವಕೀಲರ ಮುಂದಿ ರುವ ಸವಾಲುಗಳು ಹಾಗೂ ಸಾಧ್ಯತೆಗಳ ಕುರಿತು ಉಪನ್ಯಾಸ ನೀಡುವರು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್ಕುಮಾರ್ ತಿಳಿಸಿದ್ದಾರೆ.