ನಗರದಲ್ಲಿ ಇಂದು ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾ ಸಮ್ಮೇಳನ

ದಾವಣಗೆರೆ, ಆ. 25- ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ದಾವಣಗೆರೆ ಜಿಲ್ಲಾ ಶಾಖೆ ವತಿಯಿಂದ ನಾಳೆ ದಿನಾಂಕ 26 ರಂದು ಬೆಳಿಗ್ಗೆ 11 ಕ್ಕೆ ನಗರದ ಶಿವಯೋಗಾಶ್ರಮದ ಆವರಣದಲ್ಲಿ 6 ನೇ ಜಿಲ್ಲಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷೆ ಎಂ.ಬಿ. ಶಾರದಮ್ಮ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾರ್ಮಿಕ ಮುಖಂಡರೂ, ಪತ್ರಕರ್ತರಾದ ಡಾ. ಸಿದ್ಧನಗೌಡ ಪಾಟೀಲ್ ಸಮ್ಮೇಳನ ಉದ್ಘಾಟಿಸುವರು. ಫೆಡರೇಷನ್ ಜಿಲ್ಲಾಧ್ಯಕ್ಷೆ ಎಂ.ಬಿ. ಶಾರದಮ್ಮ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಫೆಡರೇಶನ್ ರಾಜ್ಯಾಧ್ಯಕ್ಷ ಅಮ್ಜದ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯ್ಯಮ್ಮ, ರಾಜ್ಯ ಉಪಾಧ್ಯಕ್ಷ ಹೊನ್ನಪ್ಪ ಮರಿಯಮ್ಮನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಎಸ್. ಅಭಿಕುಮಾರ್, ಮುಖಂಡರಾದ ಆವರಗೆರೆ ರುದ್ರಮುನಿ, ಆನಂದರಾಜ್, ಆವರಗೆರೆ ಚಂದ್ರು, ರಾಘವೇಂದ್ರ ನಾಯರಿ, ಹೆಚ್.ಜಿ. ಉಮೇಶ್, ಆವರಗೆರೆ ವಾಸು, ಮಹ್ಮದ್ ಬಾಷಾ, ಎಸ್‌.ಎಸ್‌. ಮಲ್ಲಮ್ಮ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಆವರಗೆರೆ ವಾಸು, ಎಸ್.ಎಸ್. ಮಲ್ಲಮ್ಮ, ವಿಶಾಲಾಕ್ಷಿ ಮೃತ್ಯುಂಜಯ, ಡಿ. ಗೀತಾ, ಕೆ.ಸಿ.ನಿರ್ಮಲ, ರೇಣುಕ, ಸರ್ವಮ್ಮ ಮತ್ತಿತರರಿದ್ದರು. 

error: Content is protected !!