ಶ್ರೀ ಶಿವಕುಮಾರ ಕಲಾ ಸಂಘ ಸಾಣೇಹಳ್ಳಿ ಹಾಗೂ ಸಮಸ್ತ ಭಕ್ತವೃಂದ ಇವರ ಸಹಯೋಗದಲ್ಲಿ ಇಂದು ಸಂಜೆ 6 ಗಂಟೆಗೆ ಎಸ್.ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದ ವತಿಯಿಂದ ಭಾರತದ ಪ್ರಥಮ ವಚನ ಸಂಸ್ಕೃತಿ ಅಭಿಯಾನ `ನೀ ನಿಲ್ಲದೇ ಮತ್ತಾರೂ ಇಲ್ಲವಯ್ಯ’ ಬಸವಣ್ಣನವರ ಆಯ್ದ 44 ವಚನಗಳ ಆಧಾರಿತ `ವಚನ ನೃತ್ಯ ರೂಪಕ’ ಪ್ರದರ್ಶನ ಹಾಗೂ ಗುರುವಂದನೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ, ದೇವೇಂದ್ರಪ್ಪ, ಉದ್ಯಮಿ ಎಸ್.ಎಸ್. ಗಣೇಶ್, ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ, ರಂಗ ಸಂಘಟಕ ಶ್ರೀನಿವಾಸ ಜಿ. ಕಪ್ಪಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿ. ರವಿಚಂದ್ರ ಭಾಗವಹಿಸಲಿದ್ದಾರೆ.